HEALTH TIPS

ಕೇಂದ್ರದಿಂದ ಅನುದಾನ ಬಿಡುಗಡೆಗಾಗಿ ಮಮತಾ ಬ್ಯಾನರ್ಜಿ 48 ತಾಸಿನ ಧರಣಿ

Top Post Ad

Click to join Samarasasudhi Official Whatsapp Group

Qries

            ಕೋಲ್ಕತ್ತ: ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆರಂಭಿಸಿರುವ ಧರಣಿ, ಶುಕ್ರವಾರ ರಾತ್ರಿಯಿಡೀ ಮುಂದುವರಿಯಿತು.

               ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಮುಂದೆ ಶುಕ್ರವಾರ ಮಧ್ಯಾಹ್ನ ಆರಂಭಿಸಿದ ಧರಣಿ ಚಳಿಯನ್ನು ಲೆಕ್ಕಿಸದೇ ರಾತ್ರಿಯಿಡೀ ಮುಂದುವರಿಯಿತು.

              ಮಮತಾ ಅವರನ್ನು ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲಿಸಿದರು.

             48 ತಾಸಿನ ಧರಣಿ ಭಾನುವಾರದವರೆಗೆ ಮುಂದುವರಿಯಲಿದೆ ಎಂದು ಟಿಎಂಸಿ ಪಕ್ಷದ ಮೂಲಗಳು ತಿಳಿಸಿವೆ.

                   ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ರಾಜ್ಯದ ಖಾತೆಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಬಾಕಿಯಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

                ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries