HEALTH TIPS

ತಮಿಳುನಾಡಿನಲ್ಲಿ ಸಿಎಎ ಜಾರಿಗೆ ಅವಕಾಶ ನೀಡುವುದಿಲ್ಲ: ಸ್ಟಾಲಿನ್‌

Top Post Ad

Click to join Samarasasudhi Official Whatsapp Group

Qries

            ನ್ನೈ: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತಮಿಳುನಾಡು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದರು.

            ಈ ಕುರಿತಂತೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆ ಪರ ಮತ ಚಲಾಯಿಸಿದ್ದ ಎಐಎಡಿಎಂಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

               'ಪೌರತ್ವ ತಿದ್ದುಪಡಿ ಮಸೂದೆಗೆ ಆ ಪಕ್ಷ(ಎಐಎಡಿಎಂಕೆ) ಬೆಂಬಲ ನೀಡದಿದ್ದರೆ ಅದು ಕಾನೂನಾಗದೇ ಇರಲು ಸಾಧ್ಯವಿತ್ತು. ಈ ಮಸೂದೆಯಿಂದ ಶ್ರೀಲಂಕಾದ ತಮಿಳು ನಿರಾಶ್ರಿತರು ಮತ್ತು ಮುಸ್ಲಿಮರಿಗೆ ಅನ್ಯಾಯವಾಗುತ್ತದೆ' ಎಂದು ಹೇಳಿದರು.

               ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ವಾರದೊಳಗೆ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಶಾಂತನು ಠಾಕೂರ್‌ ಭಾನುವಾರ ಹೇಳಿದ್ದರು. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಅವರು ಈ ಹೇಳಿಕೆ ನೀಡಿದ್ದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries