HEALTH TIPS

ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅಸ್ತು

Top Post Ad

Click to join Samarasasudhi Official Whatsapp Group

Qries

              ಡೆಹ್ರಾಡೂನ್: ಏಕರೂಪ ನಾಗರಿಕ ಸಂಹಿತೆಯ(ಯುಸಿಸಿ) ಅಂತಿಮ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಈ ಮೂಲಕ ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮಸೂದೆ ಮಂಡನೆ ನಿಶ್ಚಿತವಾಗಿದೆ.

              ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮುನ್ನ ಸಚಿವ ಸಂಪುಟದ ಅಂಗೀಕಾರ ಅಗತ್ಯವಿತ್ತು.

              ಈ ಹಿನ್ನೆಲೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಅಧಿಕೃತ ನಿವಾಸದಲ್ಲೇ ಭಾನುವಾರ ಸಚಿವ ಸಂಪುಟ ಸಭೆ ನಡೆಯಿತು.

                   ಯುಸಿಸಿ ಕುರಿತಾದ ಮಸೂದೆಯನ್ನು ಮಂಡಿಸಿ ಜಾರಿಗೆ ತರುವ ನಿಟ್ಟಿನಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಸ್ವಾತಂತ್ರ್ಯಾನಂತರ ದೇಶದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

                  2022ರ ವಿಧಾನಸಭೆ ಚುನಾವಣೆಯ ಸಂದರ್ಭ ಧಾಮಿ ನೀಡಿದ್ದ ಭರವಸೆಗಳಲ್ಲಿ ಯುಸಿಸಿ ಜಾರಿಯು ಪ್ರಮುಖವಾಗಿತ್ತು.

             ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ 5 ಸದಸ್ಯರ ಆಯೋಗವು ಇತ್ತೀಚೆಗೆ ಯುಸಿಸಿಯ ಅಂತಿಮ ಕರಡು ಮಸೂದೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries