ಕಾಸರಗೋಡು: ಕನ್ನಡದ ಕಟ್ಟಾಳು,ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ಬಿ.ಬಾಲಕೃಷ್ಣ ಅಗ್ಗಿತ್ತಾಯ ಮಧೂರು ಅವರನ್ನು ಪರಕ್ಕಿಲದ ಅವರ ನಿವಾಸದಲ್ಲಿ ದಲ್ಲಿ ಅಭಿನಂದಿಸಲಾಯಿತು. ಕಾಸರಗೋಡಿನಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕøತಿಗಾಗಿ ದುಡಿದ ಹಿರಿಯರನ್ನು ಗೌರವಿಸುವ ಉದ್ದೇಶದಿಂದ ಸಾಹಿತ್ಯ ಪರಿಷತ್ತು ಆರಂಭಿಸಿದ 'ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ನಡಿಗೆ ಕಾಸರಗೋಡಿನ ಕನ್ನಡದ ಹಿರಿಯ ಸಾಧಕರ ಕಡೆಗೆ' ಎಂಬ ಕಾರ್ಯಕ್ರಮದಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ಬಾಲಕೃಷ್ಣ ಅಗ್ಗಿತ್ತಾಯ,ಶಾಂತಾ ಅಗ್ಗಿತ್ತಾಯ ದಂಪತಿಯರನ್ನು ಶಾಲು ಹೊದಿಸಿ ಫಲಪುಷ್ಪ,ಸ್ಮರಣಿಕೆ ನೀಡಿ ಗೌರವಿಸಿದರು.
ಹಿರಿಯ ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಭಿನಂದನಾ ಭಾಷಣ ಮಾಡಿದರು. ಕಾಸರಗೋಡಿನಲ್ಲಿ ಕನ್ನಡಭಾಷೆ, ಸಂಸ್ಕೃತಿಗೆ ಬಾಲಕೃಷ್ಣ ಅಗ್ಗಿತ್ತಾಯ ಅವರು ನೀಡಿದ ಕೊಡುಗೆ ಅಪಾರವಾದುದು ಎಂದು ತಿಳಿಸಿದರು. ಡಾ. ಗುರುಪ್ರಸಾದ್, ಡಾ.ಅನುರಾಧ ಉಪಸ್ಥಿತರಿದ್ದರು. ಬಿ. ಬಾಲಕೃಷ್ಣ ಅಗ್ಗಿತ್ತಾಯ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿ ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ವಂದಿಸಿದರು.