ಬದಿಯಡ್ಕ: ಅನಧಿಕೃತ ಮದ್ಯ ಸಾಗಾಟ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ಮಧ್ಯೆ, ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ 10ಲಕ್ಷರೂ. ನಗದನ್ನು ಅಬಕಾರಿ ದಳ ಬದಿಯಡ್ಕ ರೇಂಜ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ಸಂಜೆ ಬೆಂಗಳೂರಿನಿಂದ ಆಗಮಿಸಿದ ಖಾಸಗಿ ಬಸ್ ತಡೆದು ತಪಾಸಣೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ಕೊಯಿಪ್ಪಾಡಿ ನಿವಾಸಿ ಕೆ. ಅಬ್ದುಲ್ ಸಮದ್ ಎಂಬಾತನನ್ನು ವಶಕ್ಕೆ ತೆಗೆದುಕೊಮಡು, ನಂತರ ಆದೂರು ಠಾಣೆ ಪೊಲೀಸರಿಗೊಪ್ಪಿಸಿದ್ದಾರೆ. ಬದಿಯಡ್ಕ ಅಬಕಾರಿ ರೇಂಜ್ ಇನ್ಸ್ಪೆಕ್ಟರ್ ಸುಬಿನ್ರಾಶಾ, ಆದೂರು ಅಬಕಾರಿ ಚೆಕ್ಪೋಸ್ಟ್ ಸಿವಿಲ್ ಎಕ್ಸೈಸ್ ಅಧಿಕಾರಿ ಪ್ರಭಾಕರನ್ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ.