ಬದಿಯಡ್ಕ: ಉದಯಗಿರಿ ಬಾಂಜತ್ತಡ್ಕ ಶ್ರೀ ಸತ್ಯನಾರಾಯಣ ಭಜನಾ ಮಂದಿರದ 24ನೇ ವಾರ್ಷಿಕೋತ್ಸವವು ವೇದಮೂರ್ತಿ ಪಾಂಡೇಲು ಶಿವಶಂಕರ ಭಟ್ಟರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೇ.23ರಂದು ಜರಗಲಿರುವುದು. ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ವೃಂದಾವನ ಬಾಲಗೋಕುಲದ ಮಕ್ಕಳಿಂದ ಭಜನೆ, 9.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭ, 10.30ಕ್ಕೆ ಶ್ರೀ ಸತ್ಯನಾರಾಯಣ ವ್ರತ ಕಥಾ ಪ್ರವಚನ ಆರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಭೋಜನ,ಅಪರಾಹ್ನ 2.ರಿಂದ ವೃಂದಾವನ ಮಹಿಳಾ ಭಜನಾ ಸಂಘದವರಿಂದ ಭಜನೆ, 3ರಿಂದ ರಾಮ ಇಕ್ಕೇರಿ ಇವರಿಂದ ಭಾಗವತ ಪಾರಾಯಣ, ಸಂಜೆ 6 ಗಂಟೆಯಿಂದ ರಣಮಂಗಲ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ತಂಡ ದೇವಸ್ಯ ಪಾಣಾಜೆ ಇವರಿಂದ ಕುಣಿತ ಭಜನೆ ಯಕ್ಷಮಿತ್ರರು ಬಾಂಜತ್ತಡ್ಕ ಪ್ರಾಯೋಜಕತ್ವದಲ್ಲಿ, ರಾತ್ರಿ 8.30ಕ್ಕೆ ಮಂಗಳಾರತಿ, ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಗಲಿದೆ.