HEALTH TIPS

ರೀಮಲ್‌ ಚಂಡಮಾರುತ : ಮಿಜೋರಾಂ, ಅಸ್ಸಾಂನಲ್ಲಿ ಭಾರಿ ಮಳೆ; 24 ಮಂದಿ ಸಾವು

Top Post Ad

Click to join Samarasasudhi Official Whatsapp Group

Qries

         ಗುವಾಹಟಿ: 'ರೀಮಲ್‌' ಚಂಡಮಾರುತದ ಪರಿಣಾಮ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ಮಳೆ ಸಂಬಂಧಿಸಿದ ಅವಘಡಗಳಲ್ಲಿ 24 ಜನರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಕಳೆದ 24 ಗಂಟೆಗಳಲ್ಲಿ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.

           ಮಿಜೋರಾಂನ ಐಜ್ವಾಲ್ ಜಿಲ್ಲೆಯ ಮೆಲ್ತುಮ್‌ನಲ್ಲಿ ಕಲ್ಲಿನ ಕ್ವಾರಿ ಕುಸಿದ ಪರಿಣಾಮ 15 ಮಂದಿ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಸ್ಸಾಂನ ಮೋರಿಗಾಂವ್ ಮತ್ತು ಲಖಿಂಪುರದಲ್ಲಿ 17 ವರ್ಷದ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಸೋನಿತ್‌ಪುರದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ ಮೇಲೆ ಮರ ಉರುಳಿದೆ. ಈ ವೇಳೆ ಬಸ್‌ನಲ್ಲಿದ್ದ 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರೀಮಲ್‌ ಚಂಡಮಾರುತದಿಂದಾಗಿ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ಧುಪ್ಗುರಿಯಲ್ಲಿ ಚಲಿಸುತ್ತಿದ್ದ ಆಟೊದ ಮೇಲೆ ಮರ ಬಿದ್ದು ವಿದ್ಯಾರ್ಥಿ ಕೌಶಿಕ್ ಅಂಫಿ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಲಖಿಂಪುರ ಜಿಲ್ಲೆಯ ಗೆರುಕಾಮುಖ್‌ನಲ್ಲಿ ಎನ್‌ಎಚ್‌ಪಿಸಿ ಯೋಜನೆಯ ಕೆಲಸಗಾರರೊಬ್ಬರು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries