HEALTH TIPS

ನಿಜ್ಜರ್ ಹತ್ಯೆ ಪ್ರಕರಣ: ಭಾರತ ಮೂಲದ 4ನೇ ಆರೋಪಿ ನ್ಯಾಯಾಲಯಕ್ಕೆ ಹಾಜರು

          ಟ್ಟಾವಾ: ಖಾಲಿಸ್ತಾನ ಪರ ಹೋರಾಟಗಾರ ಹರ್ದೀಪ್‌ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಭಾರತ ಮೂಲದ 4ನೇ ಆರೋಪಿಯನ್ನು ಕೆನಡಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

           ಶಂಕಿತ ಆರೋಪಿ, ಅಮನ್‌ದೀಪ್‌ ಸಿಂಗ್‌ನನ್ನು (22) ಬುಧವಾರ ಸರ್ರೆ ನ್ಯಾಯಾಲಯದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಗಿತ್ತು.

            ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

             ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಮೂವರು ಆರೋಪಿಗಳೊಂದಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದೆ.

              ಕೆನಡಾ ನಿವಾಸಿ ಹರ್ದೀಪ್‌ ಸಿಂಗ್ ನಿಜ್ಜರ್‌ನನ್ನು 2023ರ ಜೂನ್ 18ರಂದು ಹತ್ಯೆಗೈಯಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಕೆನಡಾ ನಡುವಣ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿತ್ತು.

              ಪ್ರಕರಣ ಸಂಬಂಧ ಮೇ 21ರಂದು ಕರಣ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಇವರ ವಿರುದ್ಧ ಕೊಲೆ ಮತ್ತು ಕೊಲೆಗೆ ಸಂಚು ಆರೋಪ ಹೊರಿಸಲಾಗಿದೆ.

                  ಅಲ್ಲದೇ ಪ್ರಕರಣದಲ್ಲಿ ನಾಲ್ಕನೇ ಆರೋಪಿ ಅಮನ್‌ದೀಪ್‌ನನ್ನು ಮೇ 11ರಂದು ಬಂಧಿಸಲಾಗಿದೆ. ಈತನ ವಿರುದ್ಧವೂ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries