HEALTH TIPS

ಜಾರ್ಖಂಡ್: ಸಚಿವ ಆಲಂಗೀರ್‌ ಆಲಂ ಬಂಧನ ಅವಧಿ ವಿಸ್ತರಣೆ

           ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಬಂಧನದ ಅವಧಿಯನ್ನು ಮೂರು ದಿನಗಳ ಕಾಲ ವಿಸ್ತರಿಸಿ ವಿಶೇಷ ನ್ಯಾಯಾಲಯ (ಪಿಎಂಎಲ್‌ಎ) ಸೋಮವಾರ ಆದೇಶಿಸಿದೆ.

         ಆಲಂ ಅವರ ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಹಾಗೂ ಹೆಚ್ಚಿನ ವಿಚಾರಣೆಗಾಗಿ ಇನ್ನೂ ಮೂರು ದಿನಗಳ ಕಾಲ ಆಲಂ ಅವರ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಇ.ಡಿ, ನ್ಯಾಯಾಲಯಕ್ಕೆ ಕೋರಿತ್ತು.   ಅದರಂತೆ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.

              ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ (52) ಮತ್ತು ಅವರ ಮನೆಗೆಲಸ ಮಾಡುತ್ತಿದ್ದ ಜಹಾಂಗೀರ್ ಆಲಂ (42) ಅವರಿಗೆ ಸಂಬಂಧಿಸಿದ ಪ್ರದೇಶದಲ್ಲಿ ಸುಮಾರು ₹32 ಕೋಟಿ ನಗದು ಪತ್ತೆಯಾಗಿತ್ತು. ನಂತರ ಇಬ್ಬರನ್ನೂ ಇ.ಡಿ ಬಂಧಿಸಿತ್ತು.

               ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಹಣ ಅಕ್ರಮ ವರ್ಗಾವಣೆ ಮತ್ತು ಲಂಚ ಪಡೆದಿರುವ ಆರೋಪದ ಕುರಿತು ಆಲಂ ಅವರ ವಿಚಾರಣೆ ನಡೆಸಲಾಗುತ್ತಿದೆ. ಮೇ 15ರಂದು ಆಲಂಗೀರ್‌ ಆಲಂ ಅವರನ್ನು ಬಂಧಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries