HEALTH TIPS

ತೆರೆಯಲಿವೆ ಕೇದಾರನಾಥ, ಗಂಗೋತ್ರಿ, ಯಮುನೇತ್ರಿ ದೇಗುಲಗಳು

            ಡೆಹರಾಡೂನ್‌: ಉತ್ತರಾಖಂಡದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕೇದಾರನಾಥ, ಗಂಗೋತ್ರಿ ಹಾಗೂ ಯಮುನೇತ್ರಿ ದೇಗುಲಗಳು ಶುಕ್ರವಾರದಿಂದ (ಮೇ 10) ಭಕ್ತರಿಗಾಗಿ ತೆರೆಯಲಿವೆ.

            ಹಿಮಾಲಯದಲ್ಲಿ ನೆಲೆ ನಿಂತಿರುವ ಈ ದೇಗುಲಗಳನ್ನು ಹಿಮಪಾತದಿಂದಾಗಿ ಚಳಿಗಾಲದಲ್ಲಿ ಮುಚ್ಚಲಾಗುತ್ತದೆ.

                 ಬೇಸಿಗೆಯ ಆರಂಭದಲ್ಲಿ ಮತ್ತೆ ತೆರೆಯಲಾಗುತ್ತದೆ. ಕೇದಾರನಾಥ ಹಾಗೂ ಯಮುನೇತ್ರಿ ದೇಗುಲಗಳನ್ನು ಬೆಳಿಗ್ಗೆ 7 ಗಂಟೆಗೆ ತೆರೆಯಲಾಗುತ್ತದೆ. ಗಂಗೋತ್ರಿ ದೇಗುಲ ಮಧ್ಯಾಹ್ನ 12.20ಕ್ಕೆ ತೆರೆಯಲಿದೆ ಎಂದು ಸಮಿತಿ ತಿಳಿಸಿದೆ.

                    ಚಾರ್‌ಧಾಮದ ಮತ್ತೊಂದು ದೇಗುಲ ಬದರಿನಾಥ, ಮೇ 12ರಂದು ಬೆಳಿಗ್ಗೆ ತೆರೆಯಲಿದೆ. ಕೇದಾರನಾಥ ದೇಗುಲವನ್ನು 20 ಕ್ವಿಂಟಲ್‌ ಹೂವುಗಳಿಂದ ಸಿಂಗರಿಸಲಾಗುವುದು ಎಂದು ಬದರಿನಾಥ-ಕೇದಾರನಾಥ ದೇಗುಲ ಸಮಿತಿಯ ಮಾಧ್ಯಮ ಉಸ್ತುವಾರಿ ಹರೀಶ್ ಗೌರ್‌ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries