HEALTH TIPS

ಕುಂಭದ್ರೋಣ ಮಳೆಯೊಂದಿಗೆ ರಾಜ್ಯಕ್ಕೆ ಮುಂಗಾರು ಆಗಮನ:ಹವಾಮಾನ ಇಲಾಖೆ

             ತಿರುವನಂತಪುರ: ಸೋಮವಾರದ ವೇಳೆಗೆ ರಾಜ್ಯಕ್ಕೆ ಮುಂಗಾರು ಆಗಮಿಸಬಹುದು ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

             ಸದ್ಯ ಲಭಿಸುತ್ತಿರುವುದು ಬೇಸಿಗೆ ಮಳೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತ ಶೀಘ್ರದಲ್ಲೇ ಕಡಮೆ ಒತ್ತಡವಾಗಿ ಪರಿಣಮಿಸಲಿದೆ.

              ಇಂದು ರಾಜ್ಯದ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಳಂ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಧ್ಯ ಕೇರಳ, ದಕ್ಷಿಣ ಕೇರಳ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

              ಮಳೆಯೊಂದಿಗೆ ಜೋರಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳ-ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಹೆಚ್ಚಿನ ಅಲೆಗಳು ಮತ್ತು ಚಂಡಮಾರುತದ ಉಲ್ಬಣವು ಸಾಧ್ಯತೆಯಿದೆ. ಕೇರಳ ಕರಾವಳಿಯಿಂದ ಸಮುದ್ರಕ್ಕೆ ತೆರಳದಂತೆ ವಿಧಿಸಿರುವ ನಿಷೇಧ ಮುಂದುವರಿಯಲಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries