HEALTH TIPS

ಶಿವ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ

                ಬದಿಯಡ್ಕ: ಕಾಸರಗೋಡು ಜಿಲ್ಲಾ ಶಿವ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಪಿಲಿಕೂಡ್ಲು ಪಾರ್ವತಿ ನಿಲಯದಲ್ಲಿ ಜರಗಿತು. ಸಂಘದ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ವೈ.ಸತ್ಯನಾರಾಯಣ ಕಾಸರಗೋಡು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸಂಘದ ಬೆಳವಣಿಗೆಯ ಬಗ್ಗೆ ಹಾಗೂ ಸದಸ್ಯತ್ವವನ್ನು ಹೆಚ್ಚಿಸುವ ಕುರಿತು ಚಿಂತನೆಯನ್ನು ನಡೆಸಬೇಕಿದೆ ಎಂದರು. 

              ಹಿರಿಯ ಸದಸ್ಯ ಎಂ.ಈಶ್ವರ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಾಲಕೃಷ್ಣ ಶರ್ಮ ಹಾಗೂ ಸುಬ್ರಹ್ಮಣ್ಯ ಮೈಲ್ತೊಟ್ಟಿ ಶುಭಹಾರೈಸಿದರು.  ಸೀತಾರಾಮ ರಾವ್ ಪಿಲಿಕೂಡ್ಲು ನೂತನವಾಗಿ ಚುನಾಯಿತರಾದ ಪದಾಧಿಕಾರಿಗಳ ಹೆಸರುಗಳನ್ನು ಪ್ರಕಟಿಸಿದರು. ನವನೀತ್ ನಿರೂಪಿಸಿದರು. ಗೋವಿಂದರಾಜ್ ಮೈಲ್ತೊಟ್ಟಿ ವಂದಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries