HEALTH TIPS

ಮತ್ತೆ ಬಾಯಿತಪ್ಪಿದ ನಿತೀಶ್‌

           ಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ಮತ್ತೊಮ್ಮೆ ಬಾಯಿತಪ್ಪಿ ಮಾತನಾಡಿದ್ದು, ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದಿವಂಗತ ರಾಮ್ ವಿಲಾಸ್‌ ಪಾಸ್ವಾನ್‌ ಅವರಿಗೆ ಮತ ಹಾಕುವಂತೆ ಕೇಳಿದ ಪ್ರಸಂಗ ನಡೆದಿದೆ. ಪಾಸ್ವಾನ್‌ ಅವರು 2020 ರಲ್ಲಿ ನಿಧನರಾಗಿದ್ದರು.

             ತಪ್ಪನ್ನು ಅರಿತ ಕೂಡಲೇ ಸರಿಪಡಿಸಿಕೊಂಡ ಅವರು, 'ರಾಮ್ ವಿಲಾಸ್ ಪಾಸ್ವಾನ್ ಅಲ್ಲ. ಅವರ ಪುತ್ರ ಚಿರಾಗ್ ಪಾಸ್ವಾನ್ ಅವರಿಗೆ ಮತ ನೀಡಿ' ಎಂದು ಮನವಿ ಮಾಡಿದರು. ಹಾಜಿಪುರ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಚಿರಾಗ್‌ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೊಂಡರು.

                ನಿತೀಶ್‌ ಅವರು ಪ್ರಚಾರ ಸಭೆಯಲ್ಲಿ ಬಾಯಿತಪ್ಪಿ ಮಾತಾಡಿದ್ದು ಇದೇ ಮೊದಲಲ್ಲ. ಈ ಹಿಂದೆ ಎರಡು ಸಲ 'ಎನ್‌ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ 4,000ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ' ಎಂದಿದ್ದರು. ಪ್ರಧಾನಿ ಮೋದಿ ಅವರ ಸಮ್ಮುಖದಲ್ಲೇ ಮುಜುಗರಕ್ಕೀಡಾಗುವ ಹೇಳಿಕೆ ನೀಡಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries