HEALTH TIPS

ಅಶೋಕನಗರ ಶ್ರೀ ಅಯ್ಯಪ್ಪ ಸ್ವಾಮಿ ಬೆಳ್ಳಿ ಛಾಯಾಚಿತ್ರ ಪ್ರತಿಷ್ಠೆ ಸಂಪನ್ನ

                    ಕಾಸರಗೋಡು: ಅಶೋಕನಗರ ಶ್ರೀ ಅಯ್ಯಪ್ಪ ಸ್ವಾಮಿ ಬೆಳ್ಳಿ ಛಾಯಾಚಿತ್ರ ಪ್ರತಿಷ್ಠೆ ಹಾಗೂ ಶ್ರೀ ವಿಷ್ಣುಮೂರ್ತಿ, ರಕ್ತೇಶ್ವರೀ, ನಾಗ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆಯಿತು.ಬ್ರಹ್ಮಶ್ರೀ ಶಂಕರನಾರಾಯಣ ಕಡಮಣ್ಣಾಯ ಬಂಬ್ರಾಣ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

                ಬೆಳಗ್ಗೆ 6.25ರಿಂದ 8.23ರ ಮಧ್ಯೆ ಶ್ರೀ ವಿಷ್ಣುಮೂರ್ತಿ, ರಕ್ತೇಶ್ವರೀ, ನಾಗ, ಗುಳಿಗ ದೈವಗಳ ಪ್ರತಿಷ್ಠೆ, ಶ್ರೀ ಅಯ್ಯಪ್ಪ ಸ್ವಾಮಿ ಬೆಳ್ಳಿ ಛಾಯಾಚಿತ್ರ ಪ್ರತಿಷ್ಠೆ ನಡೆಯಿತು. ನಂತರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅರಳೀ ವೃಕ್ಷಕ್ಕೆ ವಿಷ್ಣು ಪೂಜೆ, ಧಾರ್ಮಿಕ ಸಭೆ ನಡೆಯಿತು. ಬ್ರಹ್ಮಶ್ರೀ ವಿಷ್ಣು ಆಸ್ರ ಉಳಿಯ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು. ವಿದ್ವಾನ್ ನಾಗೇಂದ್ರ ಭಟ್ ಧಾರ್ಮಿಕ ಭಾಷಣ ಮಾಡಿದರು.  ಬ್ರಹ್ಮಶ್ರೀ ಶಂಕರನಾರಾಯಣ ಕಡಮಣ್ಣಾಯ ಬಂಬ್ರಾಣ ದಿವ್ಯ ಉಪಸ್ಥಿತರಿದ್ದರು. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries