HEALTH TIPS

ಕೇಜ್ರಿವಾಲ್ ಆಪ್ತ ಸಿಬ್ಬಂದಿಯಿಂದ ಅನುಚಿತ ವರ್ತನೆ: ಸ್ವಾತಿ ಮಲಿವಾಲ್ ಆರೋಪ

             ವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಿಬ್ಬಂದಿ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಆರೋಪಿಸಿದ್ದಾರೆ ಎಂದು ಸಿವಿನ್‌ ಲೈನ್ಸ್ ಪೊಲೀಸ್ ಠಾಣಾ ಅಧಿಕಾರಿಗಳು ತಿಳಿಸಿದರು. ಆದರೆ ಈ ಬಗ್ಗೆ ಔಪಚಾರಿಕ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

             ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿಯ ನಂತರ ಮಲಿವಾಲ್ ಅವರು ಪಿಸಿಆರ್ ಕರೆಗಳನ್ನು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಎರಡು ಕರೆಗಳನ್ನು ಮಾಡಲಾಗಿದೆ. ಆ ಬಳಿಕ ಸಿವಿಲ್ ಲೈನ್ಸ್‌ ಠಾಣೆಯ ತಂಡವೊಂದು ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದೆ ಎಂದು ಹೇಳಿದರು.

                ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿವಾಸದಿಂದಾಗಲೀ, ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದಿಂದಾಗಲೀ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries