HEALTH TIPS

ಅಬುಧಾಬಿಯ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ನಟ ರಜನಿಕಾಂತ್‌

           ಬುಧಾಬಿ: ನಟ ರಜನಿಕಾಂತ್‌ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್‌ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

            ಈ ಕುರಿತು ಬಿಎಪಿಎಸ್‌ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಟೊ, ವಿಡಿಯೊಗಳನ್ನು ಹಂಚಿಕೊಂಡಿದೆ. ವಿಡಿಯೊದಲ್ಲಿ ಅರ್ಚಕರೊಬ್ಬರು ರಜನಿಕಾಂತ್‌ ಅವರಿಗೆ ದೇವಾಲಯದ ವಿಶೇಷತೆಗಳ ಬಗ್ಗೆ ವಿವರಿಸುವುದನ್ನು ಕಾಣಬಹುದಾಗಿದೆ.


             ಕೊನೆಯಲ್ಲಿ ರಜನಿಕಾಂತ್‌ ಅವರ ಕೈಗೆ ದಾರ ಕಟ್ಟಿ, ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಮಂದಿರದಿಂದ ಬೀಳ್ಕೊಡಲಾಗಿದೆ.

            ಗುರುವಾರ ರಜನಿಕಾಂತ್‌ ಅವರು ಅಬುಧಾಬಿ ಸರ್ಕಾರದ ಕಾರ್ಯಕಾರಿ ಮಂಡಳಿಯ ಸದಸ್ಯ ಹಾಗೂ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷ ಮೊಹಮ್ಮದ್ ಖಲೀಫಾ ಅಲ್ ಮುಬಾರಕ್ ಅವರಿಂದ ಗೋಲ್ಡನ್ ವೀಸಾ ಪಡೆದುಕೊಂಡಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries