HEALTH TIPS

ಇರಾನ್‌ ಅಧ್ಯಕ್ಷ ರೈಸಿ ನಿಧನ: ಅಂತಿಮ ನಮನ ಸಲ್ಲಿಸಿದ ಉಪರಾಷ್ಟ್ರಪತಿ ಧನ್‌ಕರ್

            ತೆಹ್ರಾನ್‌: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಬುಧವಾರ ಅಂತಿಮ ನಮನ ಸಲ್ಲಿಸಿದರು.

             ಇರಾನ್‌ಗೆ ತೆರಳಿದ ಅವರು, ರೈಸಿ ಜತೆಗೆ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ವಿದೇಶಾಂಗ ಸಚಿವ ಹುಸೇನ್ ಅಮಿರ್ ಅಬ್ದುಲ್ಲಾಹಿಯಾನ್ ಹಾಗೂ ಕೆಲವು ಅಧಿಕಾರಿಗಳಿಗೆ ಅಂತಿಮ ನಮನ ಸಲ್ಲಿಸಿದರು.

                  ಇದೇ ವೇಳೆ ಇರಾನ್‌ನ ಹಂಗಾಮಿ ಅಧ್ಯಕ್ಷ ಡಾ. ಮೊಹಮ್ಮದ್ ಮೊಖ್ಬರ್ ಅವರನ್ನು ಭೇಟಿಯಾಗಿ ಸಂತಾಪ ಸೂಚಿಸಿದರು.


                    ಭಾನುವಾರ (ಮೇ 19) ಪೂರ್ವ ಅಜರ್‌ಬೈಜಾನ್‌ ಪ್ರಾಂತ್ಯದಲ್ಲಿ ಅಣೆಕಟ್ಟು ಯೋಜನೆಯೊಂದನ್ನು ಉದ್ಘಾಟಿಸಿ ಮರಳುತ್ತಿದ್ದಾಗ ಇರಾನ್-ಅಜರ್‌ಬೈಜಾನ್ ಗಡಿ ಸನಿಹದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries