ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಪೂರಕ ದೋಷಾರೋಪಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೇ ಎಂಬ ಕುರಿತ ಆದೇಶವನ್ನು ದೆಹಲಿಯ ನ್ಯಾಯಾಲಯವೊಂದು ಕಾಯ್ದಿರಿಸಿದೆ. ಆದೇಶವನ್ನು ಜೂನ್ 4ಕ್ಕೆ ನೀಡಲಿದೆ.