ಕಾಸರಗೋಡು: ಹಾಲೆಹೊಂಡ ಶ್ರೀ ಮಹಾಮಾಯೆ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ನೀಲೇಶ್ವರ ನೀಲಮನ ಶಂಭು ನಂಬೂದಿರಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಆ ಬಳಿಕ ಪಶುದ್ಧಾನ ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ಅಸ್ತುಕಲಶ ಪೂಜೆ, ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ಭಜನೆ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಮೇ 11 ರಂದು ಬೆಳಗ್ಗೆ ಅಭಿಷೇಕ, ಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಉಷಾಪೂಜೆ, ದ್ವಾರ ಪ್ರಾಯಶ್ಚಿತ ಹೋಮ, ಶಾಂತಿ ಹೋಮ, ತತ್ವ ಹೋಮ, ತತ್ವಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಹೋಮಾಭಿಷೇಕ, ತತ್ವಕಲಶಾಭಿಷೇಕ, ಶ್ರೀ ದೇವಿಯ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಧಾರ್ಮಿಕ ಸಭೆಯ ಬಳಿಕ ಸಂಜೆ ಸಾಂಸ್ಕøತಿಕ ಕಾರ್ಯಕ್ರಮ, ಬ್ರಹ್ಮಕಲಶ ಪೂಜೆ, ಕುಂಭೇಶ ಕರ್ಕೆರಿ ಪೂಜೆ, ಕಲಶ ಪೂಜೆ, ಪರಿಕಲಶ ಪೂಜೆ, ಅಧಿವಾಸ ಹೋಮ, ಭಜನೆ, ಕಲಶಾಧಿವಾಸ, ರಾತ್ರಿ ಪೂಜೆ, ಯಕ್ಷಗಾನ ಬಯಲಾಟ ಜರಗಿತು.