HEALTH TIPS

ರಾಂಚಿಯಲ್ಲಿ ED ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಬಳಿ ಕಂತೆ ಕಂತೆ ನಗದು ವಶ

            ರಾಂಚಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಇಂದು (ಸೋಮವಾರ) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ₹20 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.

         ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿದ್ದ ವೀರೇಂದ್ರ ರಾಮ್ ಅವರನ್ನು ₹100 ಕೋಟಿ ಮೌಲ್ಯದ ಆಸ್ತಿ ಗಳಿಸಿದ ಆರೋಪದ ಮೇಲೆ ಕಳೆದ ವರ್ಷ ಬಂಧಿಸಲಾಗಿತ್ತು.

ವೀರೇಂದ್ರ ಅವರ ಬಳಿ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಹೊಂದಿರುವ ಪೆನ್‌ಡ್ರೈವ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.


               ಇದೇ ಪ್ರಕರಣ ಸಂಬಂಧ ಸಂಜೀವ್ ಲಾಲ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries