HEALTH TIPS

ಜಾಮೀನು ವಿಸ್ತರಣೆಗೆ ಕೇಜ್ರಿವಾಲ್ ಮನವಿ: ತುರ್ತು ವಿಚಾರಣೆಗೆ SC ನಕಾರ

         ವದೆಹಲಿ: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

          ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೋರ್ಟ್‌ ಹೇಳಿದೆ.

          ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ಕೇಜ್ರಿವಾಲ್ ಅವರು, ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದರು. ಅವರು ಸುಪ್ರೀಂ ಕೋರ್ಟ್‌ನ ಸೂಚನೆಯ ಪ್ರಕಾರ ಜೂನ್ 2ರಂದು ಜೈಲಿಗೆ ವಾಪಸ್ ಆಗಬೇಕಿದೆ.

            ಪಿಇಟಿ-ಸಿಟಿ ಪರೀಕ್ಷೆ ಸೇರಿದಂತೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವ ಕಾರಣಕ್ಕೆ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಅವರು ಕೋರಿದ್ದರು.

ದೇಹದ ತೂಕವು ಇದ್ದಕ್ಕಿದ್ದಂತೆ ಕಡಿಮೆ ಆಗಿದೆ. ಕೀಟೊನ್ ಮಟ್ಟವು ಹೆಚ್ಚಾಗಿದೆ. ಇದು ಮೂತ್ರಕೋಶ, ಹೃದಯದ ಸಮಸ್ಯೆ ಅಥವಾ ಕ್ಯಾನ್ಸರ್‌ನ ಸೂಚಕಗಳಿರಬಹುದು. ಹೀಗಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು ಎಂದು ಅರ್ಜಿಯಲ್ಲಿ ಹೇಳಿದ್ದರು.

             ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ 21 ದಿನಗಳ ಮಧ್ಯಂತರ ಜಾಮೀನನ್ನು ಮೇ 10ರಂದು ಮಂಜೂರು ಮಾಡಿತ್ತು.

              ಕೇಜ್ರಿವಾಲ್ ಅವರು ಜೂನ್ 2ರಂದು ಶರಣಾಗಬೇಕು ಎಂದು ಮಧ್ಯಂತರ ಜಾಮೀನು ನೀಡುವಾಗ ತಾಕೀತು ಮಾಡಿತ್ತು. ಜೂನ್‌ 2ರ ಬದಲು ಜೂನ್‌ 9ಕ್ಕೆ ಜೈಲಿಗೆ ಮರಳುವುದಾಗಿ ಅವರು ಅರ್ಜಿಯಲ್ಲಿ ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries