ಬದಿಯಡ್ಕ: ನೆಕ್ರಾಜೆ ಗ್ರಾಮದ ನೆಲ್ಲಿಕಟ್ಟೆಯಲ್ಲಿ ಅಬಕಾರಿ ದಳ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 8.73ಗ್ರಾಂ ಮಾರಕ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಅಣಂಗೂರು ಟಿವಿ ಸ್ಟೇಶನ್ ಸನಿಹದ ನಿವಾಸಿ ಅಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಸಂಚಾರಕ್ಕೆ ಬಳಸಿದ್ದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಅಬಕಾರಿ ಸಹಾಯಕ ಆಯುಕ್ತ ಜಯರಾಜನ್ ಪಿ.ಕೆ ಅವರಿಗೆ ಲಭಿಸಿದ ಮಾಹಿತಿಯನ್ವಯ ಕಾಸರಗೋಡು ರೇಂಜ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.