HEALTH TIPS

ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

 ತಿರುವನಂತಪುರ: ಕೇರಳದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ರಾಜ್ಯದ ದಕ್ಷಿಣ ಮತ್ತು ಮಧ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಜತೆಗೆ, ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮರಗಳು ನೆಲಸಮಗೊಂಡಿವೆ.

ಗಂಟೆಗಳ ಕಾಲ ಸುರಿದ ನಿರಂತರ ಮಳೆಯಿಂದಾಗಿ ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳ ತಪ್ಪಲಿನ ಪ್ರದೇಶಗಳಲ್ಲಿ ಭಾರಿ ಹಾನಿ ಉಂಟಾಗಿದೆ.

ತೀವ್ರ ಮಳೆಯಿಂದಾಗಿ ತ್ರಿಶೂರ್‌ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಭಾರತೀಯ ಹವಾಮಾನ ಇಲಾಖೆಯು ಮಲಪ್ಪುರಂ, ತ್ರಿಶೂರ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌, ಇಡುಕ್ಕಿ, ಪಾಲಕ್ಕಾಡ್‌ ಮತ್ತು ವಯನಾಡ್‌ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಇತರ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಇಡುಕ್ಕಿಯ ಕೆಲ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ಮರಗಳು ನೆಲಕ್ಕುರುಳಿರುವ ಬಗ್ಗೆ ವರದಿಯಾಗಿದೆ. ಭೂಕುಸಿತದಲ್ಲಿ ಕೆಲವು ಮನೆಗಳಿಗೆ ಹಾಗೂ ವಾಹನಗಳಿಗೆ ಹಾನಿಯಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries