HEALTH TIPS

ಕಾಸರಗೋಡಿನಾದ್ಯಂತ ಭಕ್ತಿ, ಸಂಭ್ರಮದ ಬಕ್ರೀದ್ ಆಚರಣೆ

                ಕಾಸರಗೋಡು: ತ್ಯಾಗ, ಬಲಿದನದ ಸಂಕೇತವಾಗಿ ಬಕ್ರಿದ್ ಹಬ್ಬವನ್ನು ಸೋಮವಾರ ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಆಚರಿಸಿದರು. ಬೆಳಗ್ಗಿನಿಂದಲೇ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಆರಂಭಗೊಂಡಿತ್ತು.  ಇಬ್ರಹಿಂ ನಬಿ-ಹಾಜಿರಾ ದಂಪತಿ ಪುತ್ರ ಇಸ್ಮಾಯಿಲ್ ಅವರ ತ್ಯಾಗಸಂಪನ್ನತೆಯ ಸಂಕೇತವಾಗಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ.

                  ಕಾಸರಗೋಡು ತಳಂಗರೆ ಮಾಲಿಕ್‍ದೀನಾರ್ ಮಸೀದಿ, ನೆಲ್ಲಿಕುಂಜೆ ಮುಹಿಯುದ್ದೀನ್ ಜುಮಾ ಮಸೀದಿ ಸೇರಿದಂತೆ ಜಿಲ್ಲೆಯ ನಾನಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.

              ಮುಸ್ಲಿಮರು ಹೊಸ ಬಟ್ಟೆ ಧರಿಸಿ, ಮನೆಗಳಿಗೆ ತೆರಳಿ, ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. 


             ಕಾಸರಗೋಡು ತಳಂಗರೆ ಮಾಲಿಕ್‍ದೀನಾರ್ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನೆರವೇರಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries