HEALTH TIPS

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಾ.ಹರಿಕೃಷ್ಣ ಭರಣ್ಯ ಅವರಿಗೆ ಅಭಿನಂದನೆ

                  ಕುಂಬಳೆ : ಬಹುಭಾಷಾ ವಿದ್ವಾಂಸ,ಸಂಶೋಧಕ,ತಮಿಳುನಾಡಿನ ಮದುರೈ ಕಾಮರಾಜ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಹರಿಕೃಷ್ಣ ಭರಣ್ಯ ಅವರನ್ನು ಕುಂಬಳೆ ಸಮೀಪದ ನಾರಾಯಣ ಮಂಗಲದಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.

                    ಕನ್ನಡ  ಭಾಷೆ, ಸಂಸ್ಕøತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ   'ಸಾಹಿತ್ಯ ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ' ಎಂಬ ಕಾರ್ಯಕ್ರಮದಂಗವಾಗಿ ಅಭಿನಂದನೆ ಆಯೋಜಿಸಲಾಗಿತ್ತು.

                ಕನ್ನಡ ಸಾಹಿತ್ಯಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿ,  ಹರಿಕೃಷ್ಣ ಭರಣ್ಯ,ಶ್ಯಾಮಲಾ ದಂಪತಿಯರನ್ನು ಶಾಲು ಹೊದಿಸಿ, ಫಲಪುಷ್ಪ,ಸ್ಮರಣಿಕೆ ನೀಡಿ ಗೌರವಿಸಿದರು.

                  ಸಾಹಿತಿ, ನಿವೃತ್ತ ಅಧ್ಯಾಪಕ ವಿ.ಬಿ ಕುಳಮರ್ವ ಅಭಿನಂದನಾ ಭಾಷಣ ಮಾಡಿ, ಕನ್ನಡ,ತುಳು,ತಮಿಳು,ಮಲಯಾಳಂ,ಹವಿಗನ್ನಡ,ಇಂಗ್ಲೀಷ್,ಹಿಂದಿ ಸೇರಿದಂತೆ ಬಹುಭಾಷಾ ಪಂಡಿತರಾಗಿರುವ ಭರಣ್ಯ ಅವರು ಐವತ್ತಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.ಹವಿಗನ್ನಡ ಭಾಷೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ವಕೀಲ ಥಾಮಸ್ ಡಿ.ಸೋಜ ಸೀತಾಂಗೋಳಿ, ಧರ್ಮತ್ತಡ್ಕ ಲೈಬ್ರರಿ ಕೌನ್ಸಿಲ್ ಅಧ್ಯಕ್ಷ ರವಿಲೋಚನ ಸಿ.ಎಚ್ ಉಪಸ್ಥಿತರಿದ್ದರು. ಡಾ.ಹರಿಕೃಷ್ಣ ಭರಣ್ಯ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

               ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries