ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ವಾಚನ ಸಪ್ತಾಹ ಸಮಾರೋಪ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ ಜರಗಿತು. ಸಾಹಿತಿ ಸ್ನೇಹಲತ ದಿವಾಕರ್ ದೀಪ ಬೆಳಗಿಸಿ ಉದಾÐಟಿಸಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷÀ ಬಾಬು ಪಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಸ್ನೇಹಲತ ದಿವಾಕರ್ ಅವರು ಬರೆದ ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ನೌಕರ ಸಂಘದ ಕಾರ್ಯದರ್ಶಿ ಕಿರಣ್ ಕೆ, ಗೀತ ಎನ್, ಹೇಮಲತ ಎನ್, ರೆಜಿಮೋಳ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸುನೀತ ಎ ಸ್ವಾಗತಿಸಿ, ನವ್ಯಶ್ರೀ ಬಿ ವಂದಿಸಿದರು. ರಕ್ಷಾ ಕಾರ್ಯಕ್ರಮ ನಿರ್ವಹಿಸಿದರು.