HEALTH TIPS

ಕುವೈತ್ ಅಗ್ನಿದುರಂತ: ಸತ್ತವರಲ್ಲಿ ಹೆಚ್ಚಿನವರು ಕೇರಳದವರು

                ವದೆಹಲಿ: ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 42 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ವರದಿ ಮಾಡಿವೆ.

            ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಕುವೈತ್‌ಗೆ ತೆರಳಿದ್ದಾರೆ.

              ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೀರ್ತಿವರ್ಧನ್, 'ಘಟನೆ ಸಂಬಂಧ ಬುಧವಾರ ಸಂಜೆ ಪ್ರಧಾನಿಯವರೊಂದಿಗೆ ಸಭೆ ನಡೆಸಿದ್ದೇವೆ. ಅಲ್ಲಿಗೆ ತಲುಪಿದ ತಕ್ಷಣ ಪರಿಸ್ಥಿತಿಯ ಪೂರ್ಣ ಚಿತ್ರಣ ಸಿಗುತ್ತದೆ' ಎಂದರು.


            'ಕೆಲವು ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿರುವುದು ತಿಳಿದುಬಂದಿದೆ. ಮೃತದೇಹಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ. ಮೃತದೇಹಗಳನ್ನು ಸಾಗಿಸಲು ವಾಯುಪಡೆಯ ವಿಮಾನಗಳು ಸಿದ್ಧವಾಗಿವೆ. ಶವಗಳನ್ನು ಗುರುತಿಸಿದ ತಕ್ಷಣ ಸಂಬಂಧಿಕರಿಗೆ ಮಾಹಿತಿ ನೀಡಲಾಗುತ್ತದೆ' ಎಂದು ಹೇಳಿದರು.

             'ಈಗಿನ ಮಾಹಿತಿ ಪ್ರಕಾರ ದುರಂತದಲ್ಲಿ 48ರಿಂದ 49 ಮಂದಿ ಮೃತಪಟ್ಟಿದ್ದು, ಅದರಲ್ಲಿ 42ರಿಂದ 43 ಮಂದಿ ಭಾರತೀಯರು ಎಂದು ಹೇಳಲಾಗಿದೆ. ಅಲ್ಲಿಗೆ ತಲುಪಿದ ತಕ್ಷಣ ಘಟನೆಯ ಪೂರ್ಣ ಮಾಹಿತಿ ಸಿಗುತ್ತದೆ' ಎಂದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries