HEALTH TIPS

ಧಾರಾಕಾರ ಮಳೆ : ಮುಂದಿನ ಐದು ದಿನಗಳ ಕಾಲ ಭಾರೀ ವರ್ಷಧಾರೆ ಮುನ್ಸೂಚನೆ

               ತಿರುವನಂತಪುರಂ: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

            17ರಂದು ಅಲಪ್ಪುಳ, ಕಣ್ಣೂರು, ಎರ್ನಾಕುಳಂ, ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

          ಇದೇ 18ರಂದು ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಸಂಜೆ 7 ಗಂಟೆಯವರೆಗೂ ಕೇರಳ ಕರಾವಳಿಯಲ್ಲಿ ಪ್ರಕ್ಷುಬ್ದತೆ ವಿದ್ಯಮಾನ ಹಾಗೂ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

            ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚನೆ ನೀಡಲಾಗಿದ್ದು, ಕರಾವಳಿಯ ನಿವಾಸಿಗಳು ಜಾಗರೂಕರಾಗಿರಬೇಕು. ತೀವ್ರ ಸಮುದ್ರದ ಬಿರುಗಾಳಿಗಳ ಸಂದರ್ಭದಲ್ಲಿ, ಅಪಾಯದ ವಲಯಗಳಲ್ಲಿ ವಾಸಿಸುವ ಜನರು ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries