HEALTH TIPS

ವಿಪತ್ತು ನಿರ್ವಹಣಾ ಸಿಬ್ಬಂದಿಗಳಿಗೆ ತರಬೇತಿ

                 ಕಾಸರಗೋಡು: ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಶ್ರಯದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಆನ್‍ಲೈನ್ ತರಬೇತಿ ಆಯೋಜಿಸಲಾಗಿತ್ತು. ಕಾಸರಗೋಡು, ಕಣ್ಣೂರು, ವಯನಾಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳ ಐಆರ್‍ಎಸ್ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. 


            ಕಾಸರಗೋಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂಗವಾಗಿ ಸ್ಥಳೀಯಾಡಳಿತಗಳ  ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ಆನ್‍ಲೈನ್ ತರಬೇತಿಯಲ್ಲಿ ಐಆರ್‍ಎಸ್ ಅಧಿಕಾರಿಗಳು ಭಾಗವಹಿಸಿದ್ದರು. ಎನ್‍ಟಿಪಿಆರ್‍ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. 

           ಈ ತರಬೇತಿಯು ವಿಪತ್ತಿನ ಸಮಯದಲ್ಲಿ ಸಂಭವಿಸುವ ವಿಪತ್ತಿನ ಪ್ರಮಾಣವನ್ನು ಕಡಮೆ ಮಾಡಲು ಮತ್ತು ಇನ್ಸಿಡೆಂಟ್ ರೆಸ್ಪಾನ್ಸ್ ಸಿಸ್ಟಮ್ ಸಿಬ್ಬಂದಿಗಳು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಲು ಅನುವು ಮಾಡಿಕೊಡುವ ಗುರಿಯನ್ನು ಹೊಂದಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯಕ ವ್ಯವಸ್ಥಾಪಕ ಸಿ.ಜಿ.ಎಂ.ತಂಕಚನ್ ತರಗತಿ ತೆಗೆದುಕೊಂಡರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries