HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ

            ಕುಂಬಳೆ: ವಿಶ್ವಪರಿಸರದಿನಾಚರಣೆಯ ಭಾಗವಾಗಿ ಮುಜುಂಗಾವು ಶ್ರೀ ಭಾರತೀವಿದ್ಯಾಪೀಠದಲ್ಲಿ  ಗಿಡಗಳನ್ನು ನೆಟ್ಟು, ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ವಿಶೇಷ ಮಾಹಿತಿಗಳನ್ನು ನೀಡಿ ಆಚರಿಸಲಾಯಿತು. ಅತಿಥಿಗಳಾಗಿ ಆಗಮಿಸಿದ ಎಡನಾಡು ಕಣ್ಣೂರು ಸೇವಾಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಜಯಂತ ಪಾಟಾಳಿ ಅವರು ಗಿಡಗಳನ್ನು ನೆಟ್ಟು,  ಅಭಿವೃದ್ಧಿಯ ಹೆಸರಿನಲ್ಲಿ ನಮ್ಮ ಪರಿಸರವಿಂದು ಮಲಿನಗೊಳ್ಳುತ್ತಿದೆಯಲ್ಲದೇ, ನಮ್ಮ ಉಳಿವಿಗೆ ಕಾರಣವಾದ ಮರಗಳ ನಾಶವಾಗುತ್ತಿದೆ. ಆದುದರಿಂದ ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು  ಪರಿಸರ ಸ್ನೇಹಿಗಳಾಗಬೇಂದು ಕರೆ ನೀಡಿದರು.


         ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಭೆಮಾರ್ಗ ಸ್ವಾಗತಿಸಿ, ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ವಂದಿಸಿದರು. ಸಮಾಜವಿಜ್ಞಾನ ಸಂಘದ ಕಾರ್ಯದರ್ಶಿ, ಅಧ್ಯಾಪಕ  ಹರಿಪ್ರಸಾದ್ ನಿರೂಪಿಸಿದರು. ಅದ್ಯಾಪಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದರು.





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries