ಕಾಸರಗೋಡು: ವಿಶ್ವ ರಕ್ತದಾನಿಗಳ ದಿನವನ್ನು ಜಿಲ್ಲಾ ವೈದ್ಯಕೀಯ ಕಛೇರಿಯ ಸಮ್ಮೇಳನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಸರಗೋಡು ಜಿಲ್ಲಾ ವೈದ್ಯಕೀಯ ಕಛೇರಿ (ಆರೋಗ್ಯ), ರಾಷ್ಟ್ರೀಯ ಆರೋಗ್ಯ ಮಿಷನ್, ಕಾಞಂಗಾಡ್ ಜಿಲ್ಲಾ ಆಸ್ಪತ್ರೆ ಹಾಗೂ ರಕ್ತ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಞಂಗಾಡು ನಗರಸಭಾ ಅಧ್ಯಕ್ಷೆ ಕೆ.ವಿ.ಸುಜಾತಾ ಸಮಾರಂಭ ಉದ್ಘಾಟಿಸಿದರು. ಕಾಞಂಗಾಡು ಜಿಲ್ಲಾ ಆಸ್ಪತ್ರೆ ಅಧೀಕ್ಷಕ ಡಾ. ಎಂ.ಪಿ ಜೀಜಾ ರಕ್ತದಾನ ದಿನದ ಸಂದೇಶ ನೀಡಿದರು.
ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ಆರ್ಎಂಓ ಡಾ.ಶಹರ್ಬಾನಾ, ಕಿರಿಯ ಆಡಳಿತ ವೈದ್ಯಾಧಿಕಾರಿ ಡಾ. ಬಾಸಿಲ್ ವರ್ಗೀಸ್ ಮತ್ತು ತಾಂತ್ರಿಕ ಸಹಾಯಕ ಚಂದ್ರನ್ ಎಂ ಉಪಸ್ಥಿತರಿದ್ದರು. ಉಪ ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಪ್ರಶಾಂತ್ ಎನ್.ಪಿ ಸ್ವಾಗತಿಸಿದರು. ಜಿಲ್ಲಾ ಆಸ್ಪತ್ರೆ ಕಾಞಂಗಾಡ್ ಆರೋಗ್ಯ ನಿರೀಕ್ಷಕ ಮುರಳೀಧರನ್ ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ಕಾಞಂಗಾಡ್ ನಸಿರ್ಂಗ್ ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ವಿಚಾರ ಸಂಕಿರಣ ಆಯೋಜಿಸಲಾಯಿತು. ಜಿಲ್ಲಾ ಆಸ್ಪತ್ರೆ ರಕ್ತ ಕೇಂದ್ರದ ಸಲಹೆಗಾರ ಅರುಣ್ ಬೇಬಿ ತರಗತಿ ನಡೆಸಿದರು.
ಈ ಸಂದರ್ಭ ನಿರಂತರ ರಕ್ತದಾನ ನಡೆಸುತ್ತಿರುವ ದಾನಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಿದ್ದ ಮನೆಮನೆ ಶಿಬಿರದಲ್ಲಿ 34 ಮಂದಿ ರಕ್ತದಾನ ಮಾಡಿದರು. ರಕ್ತದಾನಕ್ಕಿಂತ ಮಿಗಿಲಾದದ್ದು ಮತ್ತೊಂದಿಲ್ಲ ಎಂಬ ನೆನಪಿಗಾಗಿ ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ.