HEALTH TIPS

ಸಚಿವ ಜೈಶಂಕರ್‌ ನಾಳೆ ಶ್ರೀಲಂಕಾಗೆ ಭೇಟಿ

           ವದೆಹಲಿ: ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರು ಗುರುವಾರ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೈಶಂಕರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸತತ ಎರಡನೇ ಅವಧಿಗೆ ವಿದೇಶಾಂಗ ಖಾತೆ ಗಿಟ್ಟಿಸಿಕೊಂಡ ನಂತರದ ಮೊದಲ ದ್ವಿಪಕ್ಷೀಯ ಭೇಟಿಯ ಪ್ರವಾಸ ಇದಾಗಿದೆ.

            'ಜೈಶಂಕರ್‌ ಅವರ ಶ್ರೀಲಂಕಾ ಪ್ರವಾಸವು 'ನೆರೆಯವರೇ ಮೊದಲು' ಎಂಬ ಭಾರತದ ನೀತಿಯ ಭಾಗವಾಗಿದೆ. ಉಭಯರಾಷ್ಟ್ರಗಳ ದ್ವಿಪಕ್ಷೀಯ ಬಾಂಧವ್ಯದ ಪ್ರತೀಕವಾಗಿದೆ. ಭೇಟಿಯ ವೇಳೆ ಜೈಶಂಕರ್‌ ಅವರು ಹಲವು ವಿಚಾರಗಳ ಕುರಿತಂತೆ ಶ್ರೀಲಂಕಾದ ಉನ್ನತ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಈ ಭೇಟಿಯು ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆ ಹಾಗೂ ಸಹಕಾರ ಯೋಜನೆಗಳಿಗೆ ವೇಗ ನೀಡಲಿದೆ' ಎಂದು ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries