ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಶಿಕ್ಷಣಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ನಡೆಯಿತು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ ವತ್ಸ ಮತ್ತು ಇತರ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ವೇಣುಗೋಪಾಲನ್ ನಾಯರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಶಿಕ್ಷಕಿ ಶಾರದಾ ಮಾತನಾಡಿ, ಶಾಲೆಯಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳ ಕುರಿತು ಹೆತ್ತವರೊಂದಿಗೆ ಚರ್ಚಿಸಿದರು. ರಂಗನಾಥ ಶೆಣೈ ಶಾಲೆಯ ಹಿನ್ನೆಲೆ ಮತ್ತು ಭವಿಷ್ಯಗಳ ಕುರಿತಾದ ತಮ್ಮ ಚಿಂತನೆಗಳನ್ನು ಸಭಿಕರ ಮುಂದಿಟ್ಟರು. ಈ ಸಂದರ್ಭದಲ್ಲಿ ಕ್ಷೇಮಸಮಿತಿ, ಮಾತೃಸಮಿತಿಗಳನ್ನು ರೂಪಿಸಲಾಯಿತು. ಮತ್ತು ಹೆತ್ತವರ ರಕ್ತದಾನ ಸಂಘವನ್ನು ರೂಪಿಸುವ ಕುರಿತು ಚರ್ಚಿಸಲಾಯಿತು. ಈ ಕುರಿತು ಪಾಲಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಅಧ್ಯಾಪಿಕೆ ಮಿನಿ ಮೋಳ್ ಸ್ವಾಗತಿಸಿ, ರಮ್ಯಾ ವಂದಿಸಿದರು. ಉಷಾ ವರದಿ ವಾಚಿಸಿದರು. ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.