HEALTH TIPS

ಜಬ್ಬಾರ ಸಮೊ, ಸೇರಾಜೆ ಸೀತಾರಾಮ ಭಟ್‌ಗೆ ಯಕ್ಷಗಾನ ಕಲಾರಂಗದ ಪೆರ್ಲ ಪ್ರಶಸ್ತಿ

        ಡುಪಿ: ಉಡುಪಿ ಯಕ್ಷಗಾನ ಕಲಾರಂಗವು ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ 'ಯಕ್ಷಗಾನ ಕಲಾರಂಗ ಪ್ರಶಸ್ತಿ'ಗೆ ಅನುಕ್ರಮವಾಗಿ ಅರ್ಥಧಾರಿ, ಹವ್ಯಾಸಿ ವೇಷಧಾರಿ ಜಬ್ಬಾರ ಸಮೊ ಹಾಗೂ ಅರ್ಥಧಾರಿ, ಹವ್ಯಾಸಿ ಕಲಾವಿದ, ಪ್ರಸಂಗಕರ್ತ, ಪ್ರವಚನಕಾರ ಸೇರಾಜೆ ಸೀತಾರಾಮ ಭಟ್ ಆಯ್ಕೆಯಾಗಿದ್ದಾರೆ.

             ಪ್ರಶಸ್ತಿಯು ತಲಾ 20,000ರೂ. ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ.

ಇದೇ ಜೂನ್ 23ರ ರವಿವಾರ ಅಪರಾಹ್ನ 3:00 ಗಂಟೆಗೆ ಸಂಸ್ಥೆಯ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries