ಕಾಸರಗೋಡು: ಅಂಗಾರಕ ಸಂಕಷ್ಟ ಚತುರ್ಥಿ ಅಂಗವಾಗಿ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬೆಳಗ್ಗೆ ಗಣಪತಿ ಹವನ, ವಿಶೇಷ ಅಪ್ಪ ಸೇವೆ ನಡೆಯಿತು. ಅಂಗಾರಕ ಸಂಕಷ್ಟ ಚತುರ್ಥಿ ಅಂಗವಾಗಿ ದೇವಾಲಯಕ್ಕೆ ಬೆಳಗ್ಗಿನಿಂದಲೇ ಭಕ್ತಾದಿಗಳು ಹೆಚ್ಚಿನ ಸಂಕ್ಯೆಯಲ್ಲಿ ಆಗಮಿಸಿದ್ದರು. ಭಕ್ತಾದಿಗಳು ಮಹಾಗಣಪತಿಗೆ ಗರಿಕೆ ಸಮರ್ಪಣೆಯೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪೊಯ್ಯೆತ್ತಬೈಲು ಸುಳ್ಯಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಅಂಗವಾಗಿ ಮಂಗಳವಾರ ಶ್ರೀಪ್ರಸನ್ನಗಣಪತಿ ದೇವರಿಗೆ ಗಣಹೋಮ ಹಾಗೂ ಅಪ್ಪ ಸೇವೆ ನಡೆಯಿತು.
ಅಂಗಾರಕ ಸಂಕಷ್ಟ ಚತುರ್ಥಿ ಅಂಗವಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.
ಭಕ್ತಾದಿಗಳು ಗರಿಕೆ ಸಮರ್ಪಣೆಯೊಂದಿಗೆ ಶ್ರೀಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು.