ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪ್ರಾಂಶುಪಾಲ ಶಂಕರ ಖಂಡಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭೂಮಿತ್ರಸೇನಾ ಸ್ವಯಂ ಸೇವಕರನ್ನು ಜಮೀನಿನ ಖಾಲಿ ಜಾಗದಲ್ಲಿ ಗಿಡ ನೆಡುವಂತೆ ಹುರಿದುಂಬಿಸಲಾಯಿತು. ಶಿಕ್ಷಕ, ಸಿಬ್ಬಂದಿಗಳು ಸಹಕರಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಯೋಜನಾಧಿಕಾರಿ ಕಾವ್ಯಾಚಂದ್ರನ್, ಭೂಮಿತ್ರಸೇನ ಕ್ಲಬ್ ಸಂಯೋಜಕ ಮನೋಜ್ ಕುಮಾರ್ ಪಿ. ಕಾರ್ಯಕ್ರಮ ಸಂಯೋಜಿಸಿದರು.