ಮಂಜೇಶ್ವರ : ಕೇರಳದಲ್ಲಿ ಗ್ರಂಥಾಲಯಕ್ಕೆ ನಾಂದಿ ಹಾಡಿದ ಪಿ.ಎನ್. ಪಣಿಕ್ಕರ್ ರವರ ಸಂಸ್ಮರಣೆಯ ಭಾಗವಾಗಿ ಆಚರಿಸಿದ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಕಿ ಹಾಗೂ ಲೇಖಕಿ ಲಕ್ಷ್ಮೀ ವಿ ಭಟ್ ಅವರು ಮಕ್ಕಳಿಗೆ ಶಿಶು ಗೀತೆಗಳನ್ನು ಹಾಡಿ ಮನರಂಜಿಸಿದರು. ಜೊತೆಗೆ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಗಮನ ಸೆಳೆದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೆಲು ವಹಿಸಿದ್ದರು. ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ವಾರಾಚರಣೆಯ ಭಾಗವಾಗಿ ರಚನೆಯಾದ ಹಸ್ತಪತ್ರಿಕೆಯನ್ನು ಲಕ್ಷ್ಮೀ ವಿ ಭಟ್ ಬಿಡುಗಡೆಗೊಳಿಸಿದರು.
ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಅಶ್ವಿನಿ ಎಂ, ಶ್ವೇತ ಇ, ಆಯಿಶತ್ ಸಹಕರಿಸಿದರು.