ನೈರೋಬಿ: ಹೊಸ ತೆರಿಗೆ ಹಾಗೂ ವಿವಾದಾತ್ಮಕ ಹಣಕಾಸು ಮಸೂದೆ ವಿರೋಧಿಸಿ ಕೆನ್ಯಾದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಹೈಕಮೀಷನ್ ಸಲಹೆ ಮಾಡಿದೆ.
ನೈರೋಬಿ: ಹೊಸ ತೆರಿಗೆ ಹಾಗೂ ವಿವಾದಾತ್ಮಕ ಹಣಕಾಸು ಮಸೂದೆ ವಿರೋಧಿಸಿ ಕೆನ್ಯಾದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಹೈಕಮೀಷನ್ ಸಲಹೆ ಮಾಡಿದೆ.
ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಯವರೆಗೂ ಏಳು ಜನರು ಮೃತಪಟ್ಟು 31ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಯಾನಿಟರಿ ಟವೆಲ್ ಮತ್ತು ಡಯಪರ್ಸ್ಗಳ ಮೇಲಿನ ತೆರಿಗೆ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಇದರ ಜೊತೆಗೆ ಇನ್ನೂ ಹಲವು ಸರಕುಗಳ ಮೇಲಿನ ತೆರಿಗೆ ಹೆಚ್ಚಳಕ್ಕೆ ಅನುವು ಮಾಡಿಕೊಡುವ ಹಣಕಾಸು ಮಸೂದೆ ಮೇಲೆ ಸಂಸತ್ನಲ್ಲಿ ಚರ್ಚೆ ನಡೆದಿದ್ದು, ಮಸೂದೆಯನ್ನು ಮತಕ್ಕೆ ಹಾಕಲಾಗಿದೆ.
ಪ್ರಸ್ತಾವಿತ ತೆರಿಗೆಗಳನ್ನು ವಿರೋಧಿಸಿ ಕಳೆದ ಕೆಲ ದಿನಗಳಿಂದಲೂ ಇಲ್ಲಿ ಪ್ರತಿಭಟನೆ ನಡೆಯುತ್ತಿದೆ.