ಉಪ್ಪಳ: ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠ ಕೊಂಡೆವೂರಿನಲ್ಲಿ ಶಾಲಾ ಪ್ರವೇಶೋತ್ಸವ ನಡೆಯಿತು. ಬೆಳಿಗ್ಗೆ ವಿದ್ಯಾರ್ಥಿಗಳು , ಶಿಕ್ಷಕರು ಹಾಗೂ ಹೆತ್ತವರು, ಆಡಳಿತ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಶೈಕ್ಷಣೆಕ ವರ್ಷವು ಸುಗಮವಾಗಿ ಸಾಗುವಂತೆ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಶ್ರೀಗಳ ನೇತೃತ್ವದಲ್ಲಿ ಶ್ರೀ ಗಾಯತ್ರೀ ದೇವಿ ಹಾಗೂ ನಿತ್ಯಾನಂದ ಗುರುಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಚೆಂಡೆ ಹಾಗೂ ಘೋಷÀದೊಂದಿಗೆ ಮೆರವಣಿಗೆಯ ಮೂಲಕ ಶಾಲೆಗೆ ಪ್ರವೇಶಿಸಲಾಯಿತು. ಬೆಳಿಗ್ಗೆ 9.30 ಕ್ಕೆ ವಿದ್ಯಾಪೀಠದಲ್ಲಿ ಗಣಹೋಮದ ಪೂರ್ಣಾಹುತಿ ನಡೆಯಿತು. ವಿದ್ಯಾರ್ಥಿಗಳು ಭಜನೆ ಮತ್ತು ಪ್ರಾರ್ಥನೆ ನೆರವೇರಿಸಿದರು.
ವಿದ್ಯಾಪೀಠದ ಸಂಸ್ಥಾಪಕ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ದೀಪ ಪ್ರಜ್ವಲನೆಗೈದು ಉದ್ಘಾಟಿಸಿ, ವಿದ್ಯಾರ್ಥಿಗಳು ದೈನಂದಿನ ಮಾಡಬೇಕಾದ ಕರ್ತವ್ಯಗಳು, ಪಾಲಿಸಬೇಕಾದ ನೀತಿ ನಿಯಮಗಳ ಕುರಿತು ತಿಳಿಸಿ ಭಾರತ ಮಾತೆಯ ಹೆಮ್ಮೆಯ ಪುತ್ರರಾಗಿ ಮಾದರಿಯಾಗಿ ಬದುಕು ರೂಪಿಸಲು ಆಶೀರ್ವದಿಸಿದರು.
ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಹಣತೆಯನ್ನು ಬೆಳಗಿಸಿದರು. ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಸುಧಾಕರ್ ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿದರು. ಶಾಲೆಯ ಆಡಳಿತಾಧಿಕಾರಿ ಕಮಲಾಕ್ಷ ಯಂ ವಿದ್ಯಾರ್ಥಿಗಳು ಅನುಸರಿಸಬೇಕಾದ ಶಾಲೆಯ ನಿಯಾಮಳಿಗಳ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ಪ್ರಾಂಶುಪಾಲೆ ರೇಖಾ ಪ್ರದೀಪ್ ಸ್ವಾಗತಿಸಿ ಶಿಕ್ಷಕಿ ಸ್ವಾತಿ ಪ್ರದೀಪ್ ವಂದಿಸಿದರು. ಮಲ್ಲಿಕ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಸಿಹಿತಿಂಡಿಗಳನ್ನು ವಿತರಿಸಲಾಯಿತು.