ಮಧೂರು: ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ನೇತೃತ್ವದಲ್ಲಿ ಪರಮಪೂಜ್ಯ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಯವರ 73 ನೇ ಪುಣ್ಯ ಸ್ಮರಣೆ ನಡೆಯಿತು.
ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ದೋಣಿಬಾಗಿಲು ಅಧ್ಯಕ್ಷತೆ ವಹಿಸಿದರು. ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಅರಣ್ಯ ಇಲಾಖೆಯ ಡೆಪ್ಯೂಟಿ ರೇಂಜ್ ಅಧಿಕಾರಿ ಸುನಿಲ್ ಕುಮಾರ್ ಅತಿಥಿಯಾಗಿ ಭಾಗವಹಿಸಿದ್ದರು. ಅಭ್ಯಾಗತರಾಗಿ ಕಾಸರಗೋಡು ನಗರಸಭಾ ಸದಸ್ಯ ವರಪ್ರಸಾದ್ ಕೋಟೆಕಣಿ, ರಾಮರಾಜ ಕ್ಷತ್ರಿಯ ಸೇವಾ ಸಂಘ ಕಾಸರಗೋಡು ಉಪಸಂಘ ಅಧ್ಯಕ್ಷ ವಿದ್ಯಾನಂದ ಹೂಡೆ, ಮಹಿಳಾ ಸಂಘದ ಗೌರವಾಧ್ಯಕ್ಷೆ ಆಶಾ ರಾಧಾಕೃಷ್ಣ ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಇದೇ ಸಂದಭರ್Àದಲ್ಲಿ ಸಮಾಜ ಸೇವೆ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗಾಗಿ ನಿರಂಜನ ಕೊರಕೋಡು ಅವರಿಗೆ ಶ್ರೀ ಭಿಕ್ಷು ಗೌರವಾರ್ಪಣೆ, ಎಸ್ಎಸ್ಎಲ್ಸಿಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ಹರ್ಷಿತ ಕೆ.ಕೋಟೆಕಣಿ ಅವರಿಗೆ ಶ್ರೀ ಭಿಕ್ಷು ವಿದ್ಯಾ ಗೌರವ ನಡೆಯಿತು. ಚೊಚ್ಚಲ ಕವನ ಸಂಚಲನ `ಮತ್ತೆ ಚಿಗುರಿದ ಭಾವ' ಕೃತಿ ರಚಿಸಿದ ಚಂಚಲಾಕ್ಷಿ ಶ್ಯಾಮ್ ಪ್ರಕಾಶ್ ಅವರನ್ನು ಗೌರವಿಸಲಾಯಿತು. ಜಗದೀಶ್ ಕೂಡ್ಲು ಅವರು ಶ್ರೀ ಭಿಕ್ಷು ಪುಣ್ಯ ಸ್ಮರಣೆ ಮಾಡಿದರು.
ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾವ್ಯ ಕುಶಲ ವಂದಿಸಿದರು.