ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಮಕ್ಕಳ ಶಾಲಾ ಪ್ರವೇಶೋತ್ಸವ ಮೀಯಪದವಿನ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಂಭ್ರಮದಿಂದ ಜರಗಿತು. ಮಂಜೇಶ್ವರ ಶಾಸಕÀ ಎ.ಕೆ. ಎಂ. ಅಶ್ರಫ್ ಪ್ರವೇಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಹಿತೈಷಿ ಮೋಹನ ಶೆಟ್ಟಿ ಮಜ್ಜಾರು ಕೊಡುಗೆಯಾಗಿ ನೀಡಿದ ಬ್ಯಾಗುಗಳನ್ನು ಶಾಸಕರು ಮಕ್ಕಳಿಗೆ ವಿತರಿಸಿದರು.
ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಕ್ಕಳಿಗೆ ಹಿತನುಡಿಗಳನ್ನಾಡಿದರು. ಮಂಜೇಶ್ವರದ ಪ್ರಭಾರ ವಿದ್ಯಾಧಿಕಾರಿ ಜಿತೇಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್, ಮೀಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರುಕ್ಯಾ ಸಿದ್ದಿಕ್, ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಬು, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ರಾಧಾಕೃಷ್ಣ ಕೆ.ವಿ. ಮತ್ತು ಅಶ್ವಿನಿ ಪಜ್ವ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ನಾರಾಯಣ ದೇಲಂಪಾಡಿ, ಕಾಸರಗೋಡು ಕೈಟ್ ನ ಮಾಸ್ಟರ್ ಟ್ರೈನರ್ ಪ್ರಿಯ, ವಿದ್ಯಾವರ್ಧಕ ಹಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕರೂ, ಕ್ಯಾಂಪ್ಕೋ ನಿರ್ದೇಶಕ, ಕನ್ನಡ ಸಾಹಿತ್ಯ ಪರಿಷತ್ ಕಾಸರಗೋಡು ಜಿಲ್ಲಾಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಯುಪಿ ಶಾಲೆಯ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಧರ್ ರಾವ್ ಆರ್ ಯಂ, ಮಂಜೇಶ್ವರ ಉಪಜಿಲ್ಲಾ ಯೋಜನಾಧಿಕಾರಿ ಜೋಯ್ ಜಿ, ವಿದ್ಯಾವರ್ಧಕ ಹೈಸ್ಕೂಲಿನ ನೂತನ ಮುಖ್ಯೋಪಾಧ್ಯಾಯಿನಿ ಮೃದುಲಾ, ಶಾಲಾ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರುಗಳಾದ ಹಮೀದ್ ಮೈತಲ್ ಮತ್ತು ವಿಜಿಮೋಳ್, ಮಾತೃ ಮಂಡಳಿಯ ಅಧ್ಯಕ್ಷೆ ಸ್ವಪ್ನ ಮತ್ತು ಲಲಿತ ಬುಡ್ರಿಯಾ, ವಿದ್ಯಾವರ್ಧಕ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ನಿವೃತ್ತ ಅಧ್ಯಾಪಕ ದಾಮೋದರ ಮಾಸ್ತರ್ ಶುಭಾಶಂಸನೆಗೈದರು.
ಸಭಾ ಕಾರ್ಯಕ್ರಮದ ಮೊದಲು ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಕಿರೀಟವನ್ನು ನೀಡಿ ಅವರನ್ನು ಶಾಲೆಗೆ ಆತ್ಮೀಯವಾಗಿ ಸ್ವಾಗತಿಸಿ, ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು. ಸಭಾಕಾರ್ಯಕ್ರಮದ ನಂತರ ಹೆತ್ತವರಿಗೆ ತಿಳುವಳಿಕಾ ತರಬೇತಿಯನ್ನು ಶಾಲಾ ಅಧ್ಯಾಪಕ ಬಾಲಕೃಷ್ಣ ಮಾಸ್ತರ್ ಅವರು ನಡೆಸಿಕೊಟ್ಟರು. ಬಳಿಕ ಮಕ್ಕಳಿಂದ ವಿವಿಧ ನೃತ್ಯ ವೈವಿಧ್ಯ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ಹಿರಿಯ ಅಧ್ಯಾಪಕ ರಾಮಚಂದ್ರ ವಂದಿಸಿದರು. ಅಧ್ಯಾಪಕ ಸುನಿಲ್ ಕುಮಾರ್ ಯಂ ಮತ್ತು ವಿಘ್ನೇಶ ಯಸ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.