HEALTH TIPS

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಸಭೆಯ ಸಭಾನಾಯಕ

          ವದೆಹಲಿ: ರಾಜ್ಯಸಭೆಯ 264ನೇ ಅಧಿವೇಶನದ ಮೊದಲ ದಿನವಾದ ಗುರುವಾರ ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರಾಗಿ ನೇಮಿಸಲಾಗಿದೆ.

           'ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯ ಸಭಾ ನಾಯಕರಾಗಿ ನೇಮಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ ಘೋಷಿಸುತ್ತಿದ್ದಂತೆಯೇ, ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.

ಘೋಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸದನದಲ್ಲಿ ಹಾಜರಿದ್ದರು.

             ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರಾಗಿ ಆಯ್ಕೆ ಮಾಡಲು ಬಿಜೆಪಿ ಈ ಹಿಂದೆ ನಿರ್ಧರಿಸಿ, ರಾಜ್ಯಸಭೆಯ ಗಮನಕ್ಕೆ ತಂದಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries