HEALTH TIPS

ರೇಬಿಸ್‌ ರೋಗ: ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇರಳ ಸರ್ಕಾರ

          ತಿರುವನಂತಪುರ: ರೇಬಿಸ್‌ ಸೊಂಕಿನಿಂದ ಮಕ್ಕಳನ್ನು ರಕ್ಷಿಸಲು ಕೇರಳ ಸರ್ಕಾರ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

         ಬೀದಿ ನಾಯಿಗಳು ಶಾಲೆಯ ಆವರಣದಲ್ಲಿ ಉಳಿದುಕೊಂಡು ಸಂತಾನೋತ್ಪತ್ತಿ ಮಾಡುವುದನ್ನು ತಡೆಯಬೇಕು. ಜತೆಗೆ ಮಕ್ಕಳು ಪ್ರಾಣಿಗಳ ಬಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು.

            ಶಾಲೆಗಳಲ್ಲಿ ರೇಬಿಸ್‌ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಅದನ್ನು ಹೇಗೆ ತಡೆಗಟ್ಟುವುದು ಎನ್ನುವುದನ್ನು ಮಕ್ಕಳಿಗೆ ತಿಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

             ಯಾವುದೇ ಮಕ್ಕಳಿಗೆ ನಾಯಿ ಪರಚಿದಲ್ಲಿ ಅಥವಾ ಕಚ್ಚಿದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸೂಚನೆ ನೀಡಬೇಕು. ಇದರ ಜತೆಗೆ ಶಾಲೆಗಳಲ್ಲಿ ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ರೇಬಿಸ್‌ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries