HEALTH TIPS

ಕೇರಳದಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕೇಂದ್ರವೇ ಕಾರಣ: ಸಚಿವ

           ತಿರುವನಂತಪುರ: ದೇಶದ ಸಂಯುಕ್ತ ರಚನೆಗೆ ವಿರುದ್ಧವಾದ ನಿಲುವನ್ನು ಕೇಂದ್ರ ಸರ್ಕಾರ ತಳೆದಿದೆ. ಇದೇ ಕಾರಣದಿಂದಲೇ ಕೇರಳದಲ್ಲಿ ಕೃತಕ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್‌. ಬಾಲಗೋಪಾಲ್‌ ಆರೋಪಿಸಿದ್ದಾರೆ.

          ಕೇರಳ ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 'ಕೇಂದ್ರ ಸರ್ಕಾರದ ನಿಲುವಿನಿಂದ ಕೇರಳ ಸರ್ಕಾರದ ಸಂಪನ್ಮೂಲ ಕ್ರೋಡೀಕರಣ ಕ್ರಮಗಳಿಗೆ ಹಿನ್ನಡೆಯಾಗಿದೆ.

            ಕೇರಳ ಮೂಲಸೌಕರ್ಯ ಹೂಡಿಕೆ ನಿಧಿ ಮಂಡಳಿಯು(ಕೆಐಐಎಫ್‌ಬಿ) ಕೇಂದ್ರದಿಂದ ಪಡೆದಿರುವ ಸಂಪೂರ್ಣ ಅನುದಾನವನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಒಟ್ಟಾರೆ ಸಾಲಕ್ಕೆ ಸೇರಿಸಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ರಾಜ್ಯದಲ್ಲಿ ಕೃತಕ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries