HEALTH TIPS

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

           ವದೆಹಲಿ: 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

            ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರನ್ನು ಬಿಟ್ಟು ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಬಗ್ಗೆ ವಿರೋಧ ಪಕ್ಷಗಳು ಅಸಮಾಧಾನ ಹೊರಹಾಕಿದ್ದು, ಈ ವಿವಾದ ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.


               ಅಗಲಿದ ಗಣ್ಯರ ಗೌರವಾರ್ಥ ಮೌನ ಆಚರಿಸುವುದರ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮಹತಾಬ್ ಅವರು ಕರೆ ನೀಡಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.

              ಜೂನ್‌ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries