HEALTH TIPS

ಸಂದೇಶ್‌ಖಾಲಿ: ಮಮತಾ ಮಧ್ಯಪ್ರವೇಶಿಸಲಿ- ರಾಜ್ಯಪಾಲ

           ಕೋಲ್ಕತ್ತ: ಸಂದೇಶ್‌ಖಾಲಿಯಲ್ಲಿ ನಡೆದ ಹಿಂಸಾಚಾರ ಘಟನೆಗೆ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಅನಂದ ಬೋಸ್ ಅವರು, ಪ್ರದೇಶದಲ್ಲಿ ಶಾಂತಿ ಮರುಸ್ಥಾಪಿಸಲು ಮಧ್ಯ ಪ್ರವೇಶಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಲ್ಲಿ ಕೇಳಿಕೊಂಡಿದ್ದಾರೆ.

            ಮತದಾನದ ಮರುದಿನ ಸಂದೇಶ್‌ಖಾಲಿಯಲ್ಲಿ ನಡೆದ ಹಿಂಸಾಚಾರ ಘಟನೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ ಮಮತಾ ಅವರಿಗೆ ಪತ್ರ ಬರೆದಿರುವುದಾಗಿ ಅವರು ಭಾನುವಾರ ಹೇಳಿದ್ದಾರೆ.

            'ಸಂದೇಶ್‌ಖಾಲಿಯ ಈಗಿನ ಪರಿಸ್ಥಿತಿ ಬಗ್ಗೆ ಕಳವಳಗೊಂಡಿದ್ದೇನೆ. ಮತದಾನ ಕೊನೆಗೊಂಡ ಕೆಲವೇ ಗಂಟೆಗಳಲ್ಲಿ ಅಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ' ಎಂದಿದ್ದಾರೆ.

              'ಇಂತಹ ದಾಳಿ ಮುಂದುವರಿದರೆ ಮತ್ತು ನಿವಾಸಿಗಳಿಗೆ ಕಿರುಕುಳ ನೀಡಿದರೆ, ನಾನು ರಾಜಭವನದ ಬಾಗಿಲನ್ನು ಅವರಿಗಾಗಿ ತೆರೆದಿಡುತ್ತೇನೆ. ಅವರಿಗೆ ರಾಜಭವನದಲ್ಲಿ ಸುರಕ್ಷಿತ ಆಶ್ರಯ ಕಲ್ಪಿಸಲಾಗುವುದು' ಎಂದು ಹೇಳಿದ್ದಾರೆ.

               ಮತದಾನ ದಿನದಂದು ಸಂದೇಶ್‌ಖಾಲಿಯಲ್ಲಿ ಪೊಲೀಸರ ಮೇಲೆ ನಡೆದ ದಾಳಿ ನಡೆದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆಯಲು ‌ತೆರಳಿದ್ದ ಪೊಲೀಸರು ಮತ್ತು ಮಹಿ‌ಳೆಯರ ನಡುವೆ ಭಾನುವಾರ ಘರ್ಷಣೆ ನಡೆದಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries