HEALTH TIPS

ನೀವು ರೈಲ್ವೆ ಸಚಿವರಾ, ರೀಲ್‌ ಸಚಿವರಾ? ಕಾಂಗ್ರೆಸ್‌ ಪ್ರಶ್ನೆ

          ವದೆಹಲಿ: ಕೇಂದ್ರ ಸರ್ಕಾರವು ರೈಲ್ವೆ ವ್ಯವಸ್ಥೆಯನ್ನು 'ನಾಶಪಡಿಸಿದೆ' ಎಂದು ಟೀಕಿಸಿರುವ ಕಾಂಗ್ರೆಸ್‌ ಪಕ್ಷ, 'ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು' ಎಂದು ಆಗ್ರಹಪಡಿಸಿದೆ.

          ರೈಲ್ವೆ ಅಪಘಾತದ ಸ್ಥಳಕ್ಕೆ ಸಚಿವರು ಬೈಕ್‌ನಲ್ಲಿ ಹಿಂಬದಿ ಸವಾರರಾಗಿ ತೆರಳಿದ್ದರು ಎಂಬುದನ್ನು ಟೀಕಿಸಿರುವ ವಿರೋಧ ಪ‍ಕ್ಷವು, 'ಅಶ್ವಿನಿ ವೈಷ್ಣವ್ ಅವರು ರೈಲ್ವೆ ಸಚಿವರಾ ಅಥವಾ ರೀಲ್ ಸಚಿವರಾ? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.

            ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, 'ರೈಲು ಅಪಘಾತ ಸಂಭವಿಸಿದಾಗ ರೈಲ್ವೆ ಸಚಿವರು ಕ್ಯಾಮೆರಾ ಬೆಳಕಿನ ಜೊತೆಗೆ ಭೇಟಿ ನೀಡುತ್ತಾರೆ. ಎಲ್ಲವೂ ಸರಿಯಾಗಿದೆ ಎಂಬಂತೆ ಬಿಂಬಿಸುತ್ತಾರೆ. ನರೇಂದ್ರ ಮೋದಿಯವರೇ ಹೇಳಿ. ಇದರ ಹೊಣೆ ಯಾರು ಹೊರಬೇಕು. ರೈಲ್ವೆ ಸಚಿವರಾ ಅಥವಾ ನೀವಾ? ಎಂದು ಪ್ರಶ್ನಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries