HEALTH TIPS

ಉಳ್ಳಾಲದಲ್ಲಿ ಮಳೆಗೆ ಮನೆಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ದುರಂತ ಸಾವು

          ಕ್ಷಿಣ ಕನ್ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದಿನಿಯಲ್ಲಿ ನಡೆದಿದೆ.

            ಮೃತರನ್ನು ಯಾಸೀರ್​ (45), ಮರಿಯಮ್ಮ (40), ಮಕ್ಕಳಾದ ರಿಯಾನ್​ ಮತ್ತು ರಿಫಾನ್​ ಎಂದು ಗುರುತಿಸಲಾಗಿದೆ.

             ನಿನ್ನೆ (ಜೂನ್​ 25) ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.

             ಪಕ್ಕದಲ್ಲಿ ವಾಸವಿದ್ದ ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದು ಯಾಸೀರ್​ ಅವರ ಮನೆಗೆ ಮೇಲೆ ಬಿದ್ದ ಪರಿಣಾಮ ಗೋಡೆ ಕುಸಿತವಾಗಿ ಇಡೀ ಕುಟುಂಬ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


           

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries