HEALTH TIPS

LS Speaker Election: ಸಂಸದರ ಕಡ್ಡಾಯ ಹಾಜರಾತಿಗೆ ವಿಪ್‌ ಜಾರಿ ಮಾಡಿದ ಕಾಂಗ್ರೆಸ್

            ವದೆಹಲಿ: ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಇಂದು (ಬುಧವಾರ) ಮತದಾನ ನಡೆಯಲಿದ್ದು, ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್‌ ಜಾರಿ ಮಾಡಿದೆ.

           18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವಾದ  ಮಂಗಳವಾರ ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

            ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.


           ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ. 'ಇಂಡಿಯಾ' ಮೈತ್ರಿಕೂಟವು ಕೇರಳದ ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್‌ ಸುರೇಶ್ ಅವರನ್ನು ಕಣಕ್ಕಿಳಿಸಿದೆ.

            ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭಾ ಸದಸ್ಯರಾಗಿ ಬಿರ್ಲಾ ಆಯ್ಕೆಯಾಗಿದ್ದಾರೆ. ಇತ್ತ ಕೋಡಿಕುನ್ನಿಲ್‌ ಸುರೇಶ್ ಅವರು ಕೇರಳದಿಂದ 7ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries