HEALTH TIPS

ಮಳೆ ಮಧ್ಯೆಯೇ ಅಮರನಾಥ ಯಾತ್ರೆ ಕೈಗೊಂಡ 5,600 ಯಾತ್ರಿಕರು

            ಮ್ಮು: ಭಾರಿ ಮಳೆಯ ನಡುವೆಯೇ, 5,600 ಯಾತ್ರಾರ್ಥಿಗಳ ತಂಡವು ಜಮ್ಮುವಿನ ಭಗವತಿನಗರ ಮೂಲ ಶಿಬಿರದಿಂದ ಅಮರನಾಥದ ಎರಡು ಮೂಲಶಿಬಿರಗಳಾದ ಬಾಲ್‌ಟಾಲ್‌ ಮತ್ತು ಪಹಲ್ಗಾಮ್‌ ಗುರುವಾರ ಪ್ರಯಾಣ ಆರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

          ಇದು ಏಳನೇ ತಂಡವಾಗಿದ್ದು, 4,487 ಪುರುಷರು, 1,011 ಮಹಿಳೆಯರು, 10 ಮಕ್ಕಳು ಮತ್ತು 188 ಸಾಧುಗಳು ಮತ್ತು ಸಾಧ್ವಿಯರು 219 ವಾಹನಗಳಲ್ಲಿ ಜಮ್ಮುವಿನಿಂದ ಬೆಳಿಗ್ಗೆ 3.13ಕ್ಕೆ ಹೊರಟರು.

ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಅವರಿಗೆ ಭದ್ರತೆ ಒದಗಿಸಿದರು. ಇವರಲ್ಲಿ 3,668 ಯಾತ್ರಿಗಳು 48 ಕಿ.ಮೀ ಅಂತರದ ಪಹಲ್ಗಾಮ್‌ ಹಾದಿಯನ್ನು ಆಯ್ಕೆ ಮಾಡಿಕೊಂಡರೆ, 2,028 ಯಾತ್ರಿಕರು ಕಡಿದಾದ ಬಾಲ್‌ಟಾಲ್‌ ಹಾದಿಯನ್ನು ಆಯ್ಕೆ ಮಾಡಿಕೊಂಡರು ಎಂದು ಅಧಿಕಾರಿಗಳು ತಿಳಿಸಿದರು.

                ಬುಧವಾರ ಒಂದೇದಿನ 30 ಸಾವಿರಕ್ಕೂ ಹೆಚ್ಚು ಯಾತ್ರಿಗಳು ಅಮರನಾಥ ದರ್ಶನ ಪಡೆದಿದ್ದಾರೆ. ಈ ವರೆಗೆ 1 ಲಕ್ಷಕ್ಕೂ ಹೆಚ್ಚು ಜನರು ದರ್ಶನ ಪಡೆದಂತಾಗಿದೆ ಎಂದು ಅವರು ಹೇಳಿದ್ದಾರೆ.

ಯಾತ್ರೆಯು ಆಗಸ್ಟ್‌ 19ರಂದು ಮುಕ್ತಾಯವಾಗಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries